Aadhar Link to Pahani : ಎಲ್ಲಾ ರೈತರಿಗೆ ಬಿಗ್ ಶಾಕ್.! ಈ ಕೆಲಸ ಕಡ್ಡಾಯ – ಜಮೀನು ಇರುವ ರೈತರು ತಪ್ಪದೆ ನೋಡಿ

Aadhar Link to Pahani : ಕರ್ನಾಟಕ ರಾಜ್ಯದ ಎಲ್ಲ ರೈತರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್.! ಜಮೀನಿನ ಪಹಣಿ ಇರುವ ಎಲ್ಲ ರೈತರು ಈ ಕೆಲಸ ಮಾಡುವುದು ಕಡ್ಡಾಯ. ಜಮೀನಿನ ಪಹಣಿ ಹೊಂದಿರುವ ಪ್ರತಿಯೊಬ್ಬ ರೈತರು ಈ ಕೆಲಸ ಮಾಡದೇ ಹೋದರೆ ನಿಮಗೆ ಇನ್ನು ಮುಂದೆ ಸರ್ಕಾರದಿಂದ ನೀಡಲಾಗುತ್ತಿರುವ ಕೃಷಿ ಸಂಚಾಯಿ ಯೋಜನೆಯಡಿ ಸೌಲಭ್ಯ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ, ಸಬ್ಸಿಡಿ ಪೈಪ್‌ಗಳು, ಸಬ್ಸಿಡಿ ಸ್ಪ್ರಿಂಕ್ಲರ್ ಸೇರಿದಂತೆ ಕರ್ನಾಟಕ ರಾಜ್ಯದ ಹಾಗೂ ಕೇಂದ್ರ ಸರ್ಕಾರ ರೈತರಿಗಾಗಿ ನೀಡುತ್ತಿರುವ ಎಲ್ಲ ರೀತಿಯ ಎಲ್ಲ ಸೌಲಭ್ಯಗಳನ್ನು ಪಡೆದುಕೊಳ್ಳಲು ಎಲ್ಲ ರೈತರು ಈ ಕೆಲಸ ಮಾಡುವುದು ಕಡ್ಡಾಯ ಎಂದು ಅಧಿಕೃತವಾಗಿ ಕರ್ನಾಟಕ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.

ಒಂದು ವೇಳೆ ನೀವು ಕೆಲಸ ಕಡ್ಡಾಯವಾಗಿ ಮಾಡದಿದ್ದಲ್ಲಿ ನಿಮಗೆ ಇನ್ನು ಮುಂದೆ ಸರ್ಕಾರದಿಂದ ನೀಡಲಾಗುತ್ತಿರುವ ಎಲ್ಲ ಸೌಲಭ್ಯಗಳನ್ನು ಸ್ಥಗಿತಗೊಳಿಸಲಾಗುತ್ತದೆ. ಹಾಗಿದ್ರೆ ಪ್ರತಿಯೊಬ್ಬ ರೈತರು ಕೂಡ ಕಡ್ಡಾಯವಾಗಿ ಮಾಡಲೇಬೇಕಾದ ಕೆಲಸ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ನಿಮಗೆ ಇಲ್ಲಿ ನೀಡಲಾಗಿದೆ.

ಇದನ್ನೂ ಕೂಡ ಓದಿ : Loan Facility : ಕೇಂದ್ರ ಸರ್ಕಾರ ಯಾವುದೇ ಗ್ಯಾರಂಟಿ ಇಲ್ಲದೇ 2 ಲಕ್ಷ ಸಾಲ ನೀಡುತ್ತಂತೆ.? ನೀವೂ ಕೂಡ ಅರ್ಜಿ ಸಲ್ಲಿಸಬಹುದು

ಪಹಣಿ ಅಂದರೆ ಆರ್ ಟಿಸಿಗೆ ಆಧಾರ್ ಲಿಂಕ್ ಕಡ್ಡಾಯ. ಸರ್ಕಾರದಿಂದ ಹೊಸ ಆದೇಶ. ಕರ್ನಾಟಕ ಸರ್ಕಾರದ ಹೊಸ ಆದೇಶವೊಂದು ರೈತರ ಆತಂಕಕ್ಕೆ ಕಾರಣವಾಗಿದೆ. ಪಹಣಿಗೆ ಆಧಾರ್ ಜೋಡಣೆ ಕಡ್ಡಾಯ ಎಂದು ಸರ್ಕಾರ ಆದೇಶ ಹೊರಡಿಸಿದೆ. ಇನ್ನು ಮುಂದೆ ಸರ್ಕಾರದ ಸೌಲಭ್ಯವನ್ನ ಪಡೆಯಲು ಆರ್‌ಟಿಸಿ ಆಧಾರ್ ಲಿಂಕ್ ಜೋಡಣೆ ಮಾಡುವುದು ಕಡ್ಡಾಯವಾಗಿದೆ ಎಂದು ಸರ್ಕಾರವು ಹೇಳಿದೆ. ಆರ್‌ಟಿಸಿಗೆ ಆಧಾರ್ ಜೋಡಣೆ ಮಾಡಲು ಅನುಕೂಲವಾಗುವಂತೆ ಸರ್ಕಾರ ಹೊಸದಾದ ತಂತ್ರಾಂಶವನ್ನ ಸಿದ್ಧಗೊಳಿಸಿದೆ. ಈ ಕುರಿತು ಗ್ರಾಮ ಆಡಳಿತ ಅಧಿಕಾರಿಗಳು ಪ್ರಕಟಣೆಯ ಮೂಲಕ ಮಾಹಿತಿ ನೀಡಿದ್ದಾರೆ. ಈ ಕಡ್ಡಾಯವಾದ ಕಾರ್ಯವನ್ನ ಮಾಡಲು ಸರ್ಕಾರ ಗ್ರಾಮ ಆಡಳಿತ ಅಧಿಕಾರಿಗಳಿಗೆ ಜವಾಬ್ದಾರಿ ನೀಡಿದೆ.

ಅಗತ್ಯ ದಾಖಲಾತಿಗಳು :- ಸರ್ಕಾರದ ಸೌಲಭ್ಯಗಳನ್ನು ನೇರವಾಗಿ ಪಡೆಯಲು ಬ್ಯಾಂಕಿಂಗ್ ಸೌಲಭ್ಯಗಳನ್ನು ಪಡೆಯಲು ಮತ್ತು ಕೃಷಿ ಇಲಾಖೆ ಸೌಲಭ್ಯಗಳನ್ನು ಪಡೆಯಲು ಮತ್ತು ಬೆಳೆ ಪರಿಹಾರ ಪಡೆಯಲು ಜಮೀನಿನ ಉತಾರೆಗಳಿಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯ. ಜಮೀನಿನ ಉತಾರ ಮತ್ತು ಆಧಾರ್ ಕಾರ್ಡ್ ತೆಗೆದುಕೊಂಡು ಗ್ರಾಮದ ಗ್ರಾಮ ಒನ್ ಆನ್‌ಲೈನ್‌ನಲ್ಲಿ ಕೇಂದ್ರ ಮತ್ತು ಗ್ರಾಮಾಡಳಿತ ಅಧಿಕಾರಿಗಳ ಕಚೇರಿಗೆ ಭೇಟಿ ನೀಡಬೇಕೆಂದು ತಿಳಿಸಲಾಗಿದೆ.

ಏಳು ವರ್ಷದ ಹಿಂದೆಯೇ ಕರ್ನಾಟಕ ಸರ್ಕಾರ ಆರ್‌ಟಿಸಿಗೆ ಆಧಾರ್ ಕಾರ್ಡ್ ಜೋಡಣೆ ಮಾಡುವ ಕಾರ್ಯವನ್ನು ಆರಂಭಿಸಿತ್ತು. ಕೆಲವು ರೈತರು ಆಧಾರ್ ಕಾರ್ಡ್ ಲಿಂಕ್ ಮಾಡಿದ್ದರು. ಆದರೆ ಈಗ ಸರ್ಕಾರದ ಸೌಲಭ್ಯಗಳು ಬೇಕು ಎಂದರೆ ಕಡ್ಡಾಯವಾಗಿ ಜೋಡಣೆ ಮಾಡಬೇಕು ಎಂದು ಸರ್ಕಾರ ಹೇಳಿದ್ದು, ರೈತರು ಸರ್ಕಾರಿ ಸೌಲಭ್ಯ ಪಡೆದುಕೊಳ್ಳುವಲ್ಲಿ ವಿಫಲವಾಗುತ್ತಾರೆ. ಹೆಚ್ಚಿನ ಸಂಖ್ಯೆಯ ಹಕ್ಕುಗಳು ಗೇಣಿದಾರರ ಮತ್ತು ಬೆಳೆಗಳ ಮಾಹಿತಿ ಸತ್ತ ರೈತರ ಹೆಸರಿನಲ್ಲಿ ಇನ್ನೂ ಇವೆ. ಸರ್ಕಾರದ ಯೋಜನೆಗಳ ಕಾರ್ಯವನ್ನ ಪಡೆಯಲು ಶಾಶ್ವತ ಪರಿಹಾರದ ಅಂಗವಾಗಿ ಆರ್‌ಟಿಸಿ ಆಧಾರ್ ಲಿಂಕ್ ಮಾಡಲು ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.

ಇದನ್ನೂ ಕೂಡ ಓದಿ : Veterinary Department : ಕುರಿ, ಮೇಕೆ, ಹಸು, ಎಮ್ಮೆ ಆಕಸ್ಮಿಕ ಸಾವಿಗೆ ₹10,000/- ಗಳಷ್ಟು ಸಹಾಯಧನ – ಅನುಗ್ರಹ ಯೋಜನೆ ಜಾರಿಗೆ.!

ಗ್ರಾಮ ಆಡಳಿತ ಅಧಿಕಾರಿಗಳು, ಭೂ ಮಾಲೀಕರು ರೈತರ ಮನೆಗೆ ಆಗಮಿಸಿದ ಸಂದರ್ಭದಲ್ಲಿ ಎಲ್ಲ ಆರ್ ಟಿಸಿಗಳನ್ನ ಆಧಾರ್ ಕಾರ್ಡ್ ಜೊತೆ ಲಿಂಕ್ ಮಾಡಲು ಪ್ರಕ್ರಿಯೆಗೆ ರೈತರು ಸಹಕಾರ ನೀಡಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ. ಆರ್‌ಟಿಸಿ ಆಧಾರ್ ಕಾರ್ಡ್ ಲಿಂಕ್ ಮಾಡುವುದರಿಂದ ಭೂ ಸಂಬಂಧಿತ ವಂಚನೆಗಳು ತಡೆಗಟ್ಟಲು ಸಹಾಯವಾಗುತ್ತದೆ. ಮಾಲೀಕತ್ವದ ಖಚಿತತೆ ಖಚಿತಪಡಿಸಿಕೊಳ್ಳಲು ಸಹಾಯವಾಗುತ್ತದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply