Crop Insurance : ರೈತರಿಗೆ 543 ಕೋಟಿ ಪರಿಹಾರ ಬಿಡುಗಡೆ – ಪಿಎಂ ಫಸಲ್ ಬಿಮಾ ಯೋಜನೆ

Crop Insurance : ಮಳೆ ಕೊರತೆಯಿಂದ ಬೆಳೆ ನಷ್ಟವಾಗಿ ಸಂಕಷ್ಟದಲ್ಲಿರುವ ರೈತರಿಗೆ ಈಗಾಗಲೇ ಬರ ಪರಿಹಾರ ₹2000 ಬಿಡುಗಡೆಯಾದರೂ ರೈತರಿಗೆ ಆರ್ಥಿಕ ಸಂಕಷ್ಟ ಸರಿದೂಗಿಸಲಾಗಲಿಲ್ಲ. ಈಗ ಬೆಳೆ ವಿಮೆಯ ಮಧ್ಯಂತರ ಪರಿಹಾರ ಬಿಡುಗಡೆಯಾಗಿದ್ದು, ಅನ್ನದಾತ ತುಸು ನಿಟ್ಟುಸಿರು ಬಿಡುವಂತಾಗಿದೆ.

ಈ ಬೆಳೆ ವಿಮೆ ಪರಿಹಾರ ಮೊದಲನೇ ಹಂತದಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆ ಮಾಡಿಸಿದ ರೈತರಿಗೆ ಮೊದಲು ಬಿಡುಗಡೆಯಾಗಲಿದೆ. 2023-24ನೇ ಸಾಲಿನಲ್ಲಿ ಮಳೆ ಕೊರತೆಯಿಂದ ಬೆಳೆ ಹಾನಿ ಉಂಟಾಗಿ ರೈತರು ಸಂಕಷ್ಟ ಎದುರಿಸಬೇಕಾಗಿತ್ತು. ರೈತರ ಸಮಸ್ಯೆಗೆ ಸ್ಪಂದಿಸಿದ ಜಿಲ್ಲಾಡಳಿತ ನೇತೃತ್ವದಲ್ಲಿ ಸಭೆ ನಡೆಸಿ ಸಂಕಷ್ಟದಲ್ಲಿರುವ ರೈತರಿಗೆ ಮಧ್ಯಂತರ ಪರಿಹಾರ ನೀಡುವಂತೆ ಬೇಡಿಕೆ ಸಲ್ಲಿಸಲಾಯಿತು. ಈ ಮನವಿಗೆ ಸ್ಪಂದಿಸಿದ ವಿಮಾ ಕಂಪನಿ ಮಟ್ಟದಲ್ಲಿ ಬೆಳೆ ವಿಮೆ ಪರಿಹಾರ ಮಂಜೂರು ಮಾಡಿದೆ.

ಇದನ್ನೂ ಕೂಡ ಓದಿ : Aadhar Link to Pahani : ಎಲ್ಲಾ ರೈತರಿಗೆ ಬಿಗ್ ಶಾಕ್.! ಈ ಕೆಲಸ ಕಡ್ಡಾಯ – ಜಮೀನು ಇರುವ ರೈತರು ತಪ್ಪದೆ ನೋಡಿ

ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ 2023 ರ ಮುಂಗಾರು ಹಂಗಾಮಿನ ಬೆಳೆಗಳ ಅಂತಿಮ ಇಳುವರಿ ಆಧಾರದಲ್ಲಿ ನಷ್ಟಕ್ಕೆ ಅನುಗುಣವಾಗಿ ಬೆಳೆ ಪರಿಹಾರವನ್ನು ವಿಮಾ ಸಂಸ್ಥೆಯವರಿಂದ ಕಾಲಮಿತಿಯಲ್ಲಿ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ. ಮಧ್ಯಂತರ ಬೆಳೆ ವಿಮೆ ಪರಿಹಾರ ಶೇಕಡಾ 25%ರಷ್ಟನ್ನು ರೈತರ ಖಾತೆಗೆ ಜಮಾವಣೆ ಮಾಡಲಾಗಿದ್ದು, ಉಳಿದ 75% ರಷ್ಟನ್ನು ಮಾರ್ಚ್ ತಿಂಗಳ ಅಂತ್ಯದೊಳಗೆ ರೈತರ ಖಾತೆಗೆ ಜಮಾ ಮಾಡಲಾಗುವುದು ಎಂದು ಕೃಷಿ ಸಚಿವರು ತಿಳಿಸಿದ್ದಾರೆ.

ಇದನ್ನೂ ಕೂಡ ಓದಿ : Ration Card : ರೇಷನ್ ಕಾರ್ಡ್ ಇಲ್ಲದವರಿಗೆ ಗುಡ್ ನ್ಯೂಸ್ – ಏಪ್ರಿಲ್ 1 ರಿಂದ ಬಂಪರ್ – ಹೊಸ ಕಾರ್ಡ್

ಇವರಿಗೆ ರಾಜ್ಯದ 28.80 ಲಕ್ಷ ರೈತರಿಗೆ 545.3 ಕೋಟಿ ಪಾವತಿ ಮಾಡಲಾಗಿದ್ದು, ಈ ಬೆಳೆ ಪರಿಹಾರದ ಅಂದಾಜು 37 ಲಕ್ಷ ರೈತರಿಗೆ ದೊರೆಯಲಿದೆ. ಇನ್ನು 8 ರಿಂದ 9 ಲಕ್ಷ ರೈತರಿಗೆ, ಬೆಳೆ ಹಾನಿ ಸಮೀಕ್ಷೆ ಪರಿಶೀಲನೆ ಪೂರ್ಣಗೊಂಡ ನಂತರ ಪರಿಹಾರ ಧನ ಪಾವತಿಸಲಾಗುತ್ತದೆ. ಈ ರೈತರ ಬೆಳೆ ಸಮೀಕ್ಷೆಯ ಮಾಹಿತಿಯನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ದಾಖಲಿಸಲಾಗಿದೆ. ನೋಂದಣಿ ಯಲ್ಲಿ ಬಿಟ್ಟು ಹೋಗಿರುವ ರೈತರ ಮಾಹಿತಿಯನ್ನು ಮತ್ತೆ ದಾಖಲಿಸಲು ಸೂಚಿಸಲಾಗಿದೆ. ಇದರ ಜೊತೆ ಬೆಳೆವಿಮೆ, ರೈತರ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ನೇರವಾಗಿ ವರ್ಗಾವಣೆ ಮಾಡಲಾಗುತ್ತಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply