Drought Relief : ಎಲ್ಲಾ ರೈತರಿಗೆ ಗುಡ್ ನ್ಯೂಸ್ – ಮಧ್ಯಾಹ್ನ 3:00 ಗಂಟೆಗೆ ಬರ ಪರಿಹಾರ 2ನೇ ಕಂತಿನ ಹಣ ಬಿಡುಗಡೆ

Drought Relief : ನಮಸ್ಕಾರ ಸ್ನೇಹಿತರೇ, ಈಗಾಗಲೇ ರಾಜ್ಯ ಸರ್ಕಾರದಿಂದ ಮೊದಲನೇ ಕಂತಿನ ಬರ ಪರಿಹಾರ ಹಣ ₹2000 ಮಾತ್ರ ರಾಜ್ಯ ಸರ್ಕಾರದಿಂದ ಹಾಕಲಾಗಿತ್ತು. ಆದರೆ ಮತ್ತೊಮ್ಮೆ ರಾಜ್ಯ ಸರ್ಕಾರದಿಂದ 628 ಕೋಟಿ ಅನುದಾನವನ್ನ ಬಿಡುಗಡೆ ಮಾಡಿ ರಾಜ್ಯದ ಬರ ಪೀಡಿತ ಜಿಲ್ಲೆಗಳ ಎಲ್ಲ ರೈತರ ಖಾತೆಗಳಿಗೆ ಹಣ ವರ್ಗಾವಣೆ ಮಾಡಿ ರಾಜ್ಯ ಸರ್ಕಾರದಿಂದ ಎಲ್ಲ ಬರ ಪೀಡಿತ ರೈತರಿಗೆ ಗುಡ್ ನ್ಯೂಸ್ ನೀಡಿದೆ.

ಇದನ್ನೂ ಕೂಡ ಓದಿ : eShram Card Benifits : ಈ-ಶ್ರಮ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್/ ಪ್ರತಿ ತಿಂಗಳಿಗೆ ₹3000 ಹಣ

ಬರ ಪೀಡಿತ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಬರುವ ರೈತರು ರಾಜ್ಯ ಸರ್ಕಾರದಿಂದ ಎರಡನೇ ಕಂತಿನ ಬರ ಪರಿಹಾರ ಹಣವನ್ನ ಪಡೆದುಕೊಳ್ಳಬಹುದಾಗಿದೆ. ಇನ್ನು ಕೂಡ ನಿಮ್ಮ ಖಾತೆಗೆ ಎರಡನೇ ಕಂತಿನ ರಾಜ್ಯ ಸರ್ಕಾರದ ಬರ ಪರಿಹಾರದ ಹಣ ವರ್ಗಾವಣೆಯಾಗಿಲ್ಲ ಅಂದ್ರೆ ತಪ್ಪದೆ ಈ ಲೇಖನವನ್ನ ಕೊನೆವರೆಗೂ ನೋಡಿ.

ಬರದಿಂದ ತತ್ತರಿಸಿರುವ ರಾಜ್ಯದ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 628 ಕೋಟಿ ರೂಪಾಯಿ ಹಣವನ್ನ ಬರ ಪರಿಹಾರವಾಗಿ ನೇರವಾಗಿ 33 ಲಕ್ಷ ರೈತರ ಖಾತೆಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು, ಬರ ನಿರ್ವಹಣೆಗೆ ಪರಿಹಾರ ಕ್ರಮವಾಗಿ ₹2000 ಕೋಟಿ ರೂಪಾಯಿ ಅನುದಾನ ನಿಗದಿಪಡಿಸಿದ್ದು, ಈಗಾಗಲೇ 33 ಲಕ್ಷ ರೈತರ ಖಾತೆಗಳಿಗೆ ಬಿಡುಗಡೆ ಮಾಡಲಾಗಿದೆ.

ಇದನ್ನೂ ಕೂಡ ಓದಿ : Govt Scheme Updates : ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆ – ಹಣ ಜಮಾ ಆಗುವುದಿಲ್ಲ – ಬಿಗ್ ಶಾಕಿಂಗ್ ನ್ಯೂಸ್, ಹೊಸ ರೂಲ್ಸ್ ಜಾರಿಗೆ.!

1.6 ಲಕ್ಷ ರೈತರ ಬ್ಯಾಂಕ್ ಖಾತೆಯ ಮಾರ್ಪಾಡು ಪ್ರಕ್ರಿಯೆ ನಡೆಯುತ್ತಿದ್ದು, ಇದು ಸರಿಯಾದ ಕೂಡಲೇ ಅವರ ಖಾತೆಗೆ ಹಣ ಜಮೆ ಆಗಲಿದೆ ಎಂದು ಸಚಿವರು ತಿಳಿಸಿದ್ದಾರೆ. ರಾಜ್ಯ ಸರ್ಕಾರವು ರಾಜ್ಯದ 223 ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಕುಡಿಯುವ ನೀರು, ಮೇವು ಹಾಗೂ ಇತರೆ ಮೂಲಭೂತ ಸಮಸ್ಯೆಗಳ ನಿವಾರಣೆಗೆ ಜಿಲ್ಲಾಧಿಕಾರಿ ಹಾಗೂ ತಹಸೀಲ್ದಾರ್ ಗಳ ಖಾತೆಗಳಿಗೆ 870 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

ಅರ್ಹ ರೈತರಿಗೆ ಬರ ಪರಿಹಾರದ ಹಣ ತಲುಪಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ರೈತರ ಹೆಸರು ಪ್ರಕಟಣೆ ಮಾಡಲಾಗಿದೆ. ಆ ಪಟ್ಟಿಯಲ್ಲಿ ರೈತರ ಹೆಸರು ಬಿಟ್ಟು ಹೋಗಿದ್ದಲ್ಲಿ, ಅಂತಹ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸ್ಥಳೀಯ ಕಂದಾಯ ಇಲಾಖೆ ಕಚೇರಿಗೆ ಭೇಟಿ ನೀಡಿ ಹೆಸರು ಸೇರ್ಪಡಿಸಿಕೊಳ್ಳಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.

ಇದನ್ನೂ ಕೂಡ ಓದಿ : ಮನೆ ಖರೀದಿ ಅಥವಾ ಕಟ್ಟಡಕ್ಕೆ ಕೇಂದ್ರ ಸರ್ಕಾರದಿಂದ ಬಂಪರ್ ಗಿಫ್ಟ್ / ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ / Housing Scheme

ಇಷ್ಟಕ್ಕೂ ನಿಮ್ಮ ಬ್ಯಾಂಕ್ ಖಾತೆಗೆ ರಾಜ್ಯ ಸರ್ಕಾರದಿಂದ ಇನ್ನೂ ಕೂಡ ಬರ ಪರಿಹಾರದ ಮೊದಲನೇ ಕಂತಿನ ಹಣ ₹2,000 ರೂಪಾಯಿ ಹಾಗು ಬರ ಪರಿಹಾರದ ಎರಡನೇ ಕಂತಿನ ಹಣವು ಕೂಡ ಬಂದಿಲ್ಲವೆಂದರೆ, ಈ ಕೂಡಲೇ ನಿಮ್ಮ ಆಧಾರ್ ಕಾರ್ಡ್ ಸಂಖ್ಯೆಯು ಯಾವ ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಆಗಿದೆ ಎಂದು ಪರಿಶೀಲಿಸಿಕೊಳ್ಳಿ. ಇಲ್ಲವಾದರೆ ನಿಮ್ಮ ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ ಕಾರ್ಡ್ ಸರಿಯಾಗಿ ಲಿಂಕ್ ಆಗಿದೆಯಾ ಎಂದು ಬ್ಯಾಂಕ್ ಗೆ ಭೇಟಿ ನೀಡಿ, ಈ-ಕೆವೈಸಿಯನ್ನ ಮಾಡಿಸಿಕೊಳ್ಳಿ. ಮುಂದಿನ ಮೂರು ಕೆಲಸದ ದಿನಗಳಲ್ಲಿ ಹಣವು ನಿಮ್ಮ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗಲಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply