Free Home Scheme : ಸ್ವಂತ ಮನೆಯಿಲ್ಲದವರಿಗೆ ವಸತಿ ಸಚಿವರಿಂದ ಗುಡ್ ನ್ಯೂಸ್.!

Free Home Scheme : ನಮಸ್ಕಾರ ಸ್ನೇಹಿತರೇ, ರಾಜ್ಯದ ನೂತನ ಸಚಿವರಾದ ಜಮೀರ್ ಅಹ್ಮದ್ ಅವರು, ರಾಜ್ಯದಲ್ಲಿ ವಾಸಿಸಲು ಸ್ವಂತ ಮನೆಯಿಲ್ಲದವರಿಗೆ, ಸ್ವಂತ ಜಾಗವಿಲ್ಲದವರಿಗೆ, ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ರಾಜ್ಯದ ಎಲ್ಲಾ ಬಡವರಿಗೆ ಭಾರೀ ದೊಡ್ಡ ಗುಡ್ ನ್ಯೂಸ್ ನೀಡಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರದಿಂದ ಉಚಿತವಾಗಿ ಮನೆ ಪಡೆದುಕೊಳ್ಳಲು ಬಯಸುತ್ತಿರುವವರಿಗೆ ವಸತಿ ಸಚಿವ ಜಮೀರ್ ಅವರು ಮನೆಯಿಲ್ಲದವರಿಗೆ ನೀಡಿರುವ ಗುಡ್ ನ್ಯೂಸ್ ಆದರೂ ಏನು.? ಎನ್ನುವ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ.

Whatsapp Group Join
Telegram channel Join

ಇದನ್ನೂ ಕೂಡ ಓದಿ : Oldage Scheme : 60 ವರ್ಷ ಮೇಲ್ಪಟ್ಟವರಿಗೆ ಸಿಹಿಸುದ್ಧಿ / ಏನಿದು ಸ್ಕೀಮ್.? ಬೇಗ ಚೆಕ್ ಮಾಡಿ

ರಾಜ್ಯದಲ್ಲಿ ಕಾಂಗ್ರೆಸ್ ಐದು ಗ್ಯಾರಂಟಿ ಯೋಜನೆಗಳನ್ನ ನೀಡುವ ಮೂಲಕ, ಕಾಂಗ್ರೆಸ್ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಕೇವಲ ಐದು ಗ್ಯಾರಂಟಿಗಳನ್ನು ಮಾತ್ರ ನೀಡುವುದಿಲ್ಲ. ಇನ್ನು ಮುಂದೆ ಬಡವರಿಗೆ, ಸಾರ್ವಜನಿಕರಿಗೆ ಮೇಲಿಂದ ಮೇಲೆ ಗ್ಯಾರಂಟಿಗಳಿಗಿಂತಲೂ ಹೆಚ್ಚಿನ ಸರ್ಕಾರದ ಸೌಲಭ್ಯಗಳನ್ನೂ ಹಾಗು ಜನರಿಗೆ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಕಾರ್ಯನಿರ್ವಹಿಸುತ್ತದೆ ಎಂದು ಸಚಿವ ಜಮೀರ್ ಅಹ್ಮದ್ ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗು ಕೇಂದ್ರ ಸರ್ಕಾರ ವಾಸಿಸಲು ಸ್ವಂತ ಮನೆಯಿಲ್ಲದವರಿಗೆ ಹಾಗು ಬಾಡಿಗೆ ಮನೆಯಲ್ಲಿ ವಾಸಿಸುವವರಿಗೆ ಹೊಸ ಹೊಸ ಯೋಜನೆಗಳನ್ನ ಜಾರಿಗೊಳಿಸಲಾಗುತ್ತಿದೆ.

Whatsapp Group Join
Telegram channel Join

ಇದನ್ನೂ ಕೂಡ ಓದಿ : Raining News Today : ಮಳೆ ಅಲರ್ಟ್.! ಮುಂದಿನ 24 ಗಂಟೆ ಈ ಜಿಲ್ಲೆಗಳಲ್ಲಿ ಅಲರ್ಟ್!

ರಾಜ್ಯದ ನೂತನ ವಸತಿ ಸಚಿವರಾದ ಜಮೀರ್ ಅಹ್ಮದ್ ಅವರು, ರಾಜ್ಯದಾದ್ಯಂತವಿರುವ ಎಲ್ಲಾ ಗ್ರಾಮೀಣ ಭಾಗ ಹಾಗು ನಗರ ಭಾಗದ ನಿವಾಸಿಗಳಿಗೆ ಅದರಲ್ಲೂ ಸ್ವಂತ ಮನೆಯಿಲ್ಲದ ಬಡ ಕುಟುಂಬಗಳಿಗೆ ಸಿಹಿಸುದ್ಧಿಯನ್ನ ನೀಡುವುದರ ಮೂಲಕ ನಾವು ಕೂಡ ನಮ್ಮ ಕಾಂಗ್ರೆಸ್ ಸರ್ಕಾರದ ಛಾಯೆ ಮೂಡಿಸುವ ಮೂಲಕ ಹಿಂದಿನ ಸರ್ಕಾರಗಳ ನೆನಪು ಕೂಡ ಬಾರದಂತೆ ಜನರಿಗೆ ಅಷ್ಟೊಂದು ಒಳ್ಳೆಯ ಕೆಲಸಗಳನ್ನ ಮಾಡುತ್ತೇವೆ ಎಂದು ತಿಳಿಸಿದ್ದು, ಬಡವರಿಗೆ ರೂಪಿಸಿದ ವಸತಿ ಯೋಜನೆಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ವಸತಿ ಸಚಿವ ಜಮೀರ್ ಅಹ್ಮದ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವಸತಿ ಇಲಾಖೆ ವ್ಯಾಪ್ತಿಗೆ ಬರುವ ರಾಜೀವ್ ಗಾಂಧಿ ವಸತಿ ನಿಗಮದ ಪ್ರಗತಿ ಪರಿಶೀಲನೆ ನಡೆಸಿದ ಅವರು ಬಡವರಿಗೆ ರೂಪಿಸಿದ ವಸತಿ ಯೋಜನೆಗೆ ನಿಗದಿತ ಕಾಲಮಿತಿ ಹಾಕಿಕೊಂಡು ಅದನ್ನ ಪೂರ್ಣಗೊಳಿಸಿದ ನಂತರ ಮತ್ತೊಂದು ಯೋಜನೆ ಕೈಗೊಳ್ಳುವಂತೆ ತಿಳಿಸಿದ್ದಾರೆ. ನಿಗದಿತ ಅವಧಿಯೊಳಗೆ ಯೋಜನೆ ಪೂರ್ಣಗೊಳ್ಳದಿದ್ದರೆ, ಬಡವರಿಗೆ ವಸತಿ ಕಲ್ಪಿಸಲು ಉದ್ದೇಶ ಈಡೇರುವುದಿಲ್ಲ. ಹೀಗಾಗಿ ಕಾಲಮಿತಿಯೊಳಗೆ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಬೇಕು. ವಿಳಂಬವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳ ಒಂದು ಲಕ್ಷ ವಸತಿ ಕಲ್ಪಿಸುವ ಯೋಜನೆ ನಿರೀಕ್ಷಿತ ಮಟ್ಟದಲ್ಲಿ ಪ್ರಗತಿಯಾಗದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು ಆರಂಭಿಕ ಹಣ ಪಾವತಿಸಿದ ಅರ್ಜಿದಾರರಿಗೆ, ಫಲಾನುಭವಿಗಳಿಗೆ ಇನ್ನು ಮನೆ ಕೊಟ್ಟಿಲ್ಲ. ಈ ನಿಟ್ಟಿನಲ್ಲಿ ಕೂಡಲೇ ಕ್ರಮ ಕೈಕೊಳ್ಳಬೇಕೆಂದು ಹೇಳಿದ್ದಾರೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..