ಕಿರಿಕ್ ಪಾರ್ಟಿ ನಿರ್ದೇಶಕ ರಿಷಬ್ ಶೆಟ್ಟಿ ಯವರು ‘ಕಾಂತಾರ’ ಮೂಲಕ ಹೊಸ ಹೊಸ ದಾಖಲೆಗಳನ್ನ ಬರೆಯುತ್ತಿದ್ದಾರೆ. ಈ ಸಿನಿಮಾದ ಕಲೆಕ್ಷನ್ ದಿನದಿಂದ ದಿನಕ್ಕೆ ಏರಿಕೆಯತ್ತ ಮುಖ ಮಾಡಿದೆ. ಇದೆಲ್ಲದರ ಮಧ್ಯೆ ಸಿನಿಮಾದ ಬಗ್ಗೆ ಎಲ್ಲರೂ ಮೆಚ್ಚುಗೆಯ ಮಾತನಾಡುತ್ತಿದ್ದಾರೆ. ನವರಸ ನಾಯಕ ಜಗ್ಗೇಶ್ ಅವರು ಕೂಡ ‘ಕಾಂತಾರ’ ಸಿನಿಮಾದ ಬಗ್ಗೆ ‘ದೇವರೇ ಆತನ ಕೈಯಲ್ಲಿ ಇಂತಹ ಅದ್ಭುತ ಸಿನಿಮಾ ಮಾಡಿಸಿದ್ದಾರೆ’ ಎಂದು ಮೆಚ್ಚುಗೆಯ ಮಾತನ್ನಾಡಿದ್ದಾರೆ.
‘ಜಗ್ಗೇಶ್ ಅವರು ಕಾಂತಾರ ಬಗ್ಗೆ ಮಾಡಿರುವ ಪೋಸ್ಟ್’
ಕನ್ನಡ ಚಿತ್ರರಂಗದ ಒಳಿತು ಬಯಸಿ ಬದುಕುತ್ತಿರುವ ಜೀವ ನನ್ನದು ಕಾರಣ ನನ್ನ ಬದುಕಿಗೆ ಸಕಲವು ನೀಡಿದ ನನ್ನ ತಾಯಿ ಕನ್ನಡ ಚಿತ್ರರಂಗ..ಬಾಲ್ಯದಿಂದ ಕನ್ನಡ ಹಾಗು ರಾಜಣ್ಣನ ಹುಚ್ಚು ಅಭಿಮಾನಿಯಾದ ನಾನು ಕರುನಾಡ ದಾಟಿ ಹೊರಹೋಗದೆ ಬದುಕಿದವನು..ಸದಾ ನನ್ನ ಕನ್ನಡದ ಕಲಾರಂಗ ಜಗಮೆಚ್ಚುವ ರಂಗ ಆಗಬೇಕು ಎಂದು ಹಂಬಲಿಸುವ ಜನ್ಮ ನನ್ನದು..
ಇತ್ತೀಚಿನ ಚಿತ್ರ ಕಾಂತಾರ ವಿದೇಶಕ್ಕೆ ಬಂದ ಕಾರಣ ನೋಡಲಾಗಲಿಲ್ಲಾ ಆದರೆ ನನ್ನ ಅಕ್ಕನ ಮಗ #ಜೀವನ್ ಹಾಗು ನನ್ನ ಅನೇಕ ಚಿತ್ರ #ಗುರು #ಮೇಲುಕೋಟೆಮಂಜ ಚಿತ್ರದಲ್ಲಿ ಕಳನಟನಾಗಿ ಅಭಿನಯಿಸಿದನು
ಇಂದು ಅಮೇರಿಕದ ಡೆನ್ವರ್ ನಲ್ಲಿ #ಒರ್ಯಾಕಲ್ ಸಂಸ್ಥೆಯಲ್ಲೆ ಶ್ರೇಷ್ಠ ಸ್ಥಾನದಲ್ಲಿರುವ ಅವನ ಮನೆ ಹತ್ತಿರದಲ್ಲೆ ಮಾಲ್ ಇತ್ತು ಅಲ್ಲಿ ಕಾಂತಾರ ನೋಡುವ ಅವಕಾಶ ಸಿಕ್ಕಿತು ನೋಡಿ ಬಂದೆ..
ನಾನು ದಕ್ಷಿಣ ಕನ್ನಡದ ದೇವಾಲಯದ ಭಕ್ತ ವರ್ಷಕ್ಕೆ ಒಂದು ಬಾರಿ ಪೊಳಲಿ,ಕಟೀಲು,ಉಡುಪಿಕೃಷ್ಣ,ಮೂಕಾಂಬಿಕೆ,ಕೊರಗಜ್ಜ,ಅಂಬಲಪಾಡಿ,ಉಡುಪಿ ರಾಯರ ಮಠ ದರ್ಶನ ಪಡೆವುದು ನನ್ನ 30ವರ್ಷದ ಅಭ್ಯಾಸ ಇದು ನನ್ನ ಪ್ರಕಾರ ಶ್ರೇಷ್ಠ ದೇವಭೂಮಿ.. ಆಧ್ಯಾತ್ಮಿಕ ಅನುಭವಕ್ಕೆ ಈ ಕ್ಷೇತ್ರದಲ್ಲಿ ಸಂತೃಪ್ತ ಭಾವ ಸಿಗುತ್ತದೆ..ಇಂಥ ನಾಡಿನಿಂದ ಎಂಥ ಅದ್ಭುತ ನಟ ನಿರ್ದೇಶಕ #ರಿಷಭ್ ಶೆಟ್ಟಿ ಹುಟ್ಟಿಬಂದ ಎಂಥ ಅದ್ಭುತ ಕೊಡುಗೆ ಈತ ಕನ್ನಡ ಚಿತ್ರರಂಗಕ್ಕೆ..ಕಾಂತಾರ ಕಡೆಯ 25ನಿಮಿಷ ನಾನು ಎಲ್ಲಿರುವೆ ಮರೆತು ಹೋಯಿತು ಚಿತ್ರ ನೋಡಿದ ಮೇಲೆ ಮೌನವಾಯಿತು ದೇಹ ಮನಸ್ಸು ಹೊರಬಂದಾಗ ಕಾಕತಾಳಿಯ ಎಂಬಂತೆ ಮಂತ್ರಾಲಯ ನರಸಿಂಹಚಾರ್ ವಾಟ್ಸ್ಯಾಪ್ ಕರೆಮಾಡಿ ರಾಯರ ದರ್ಶನ ಮಾಡಿಸಿದರು ಮೂಕವಿಸ್ಮಿತನಾದೆ ..ನಂತರ ನನಗೆ ಅನ್ನಿಸಿದ್ದು ಇದು ವೃಷಭ್ ಮಾಡಿದ ಚಿತ್ರವಲ್ಲಾ ಬದಲಿಗೆ ಆತನ ವಂಶೀಕರ ತಂದೆ ತಾಯಿಯ ಆಶೀರ್ವಾದ ನಶಿಸುತ್ತಿರುವ ಆಧ್ಯಾತ್ಮಿಕ ಭಾವ ಮತ್ತೆ ಮನುಷ್ಯರಿಗೆ ನೆನಪಿಸಲು ದೇವರೆ ಬಂದು ಆತನ ಕೈಯಲ್ಲಿ ಇಂಥ ಅದ್ಭುತ ಸಿನಿಮ ಮಾಡಿಸಿದ್ದಾರೆ..ದೇವರ ದಯೆಯಿಂದ ರಿಷಭನಿಗೆ ನೂರ್ಕಾಲ ಆಯುಷ್ಯ ಆರೋಗ್ಯ ಕೊಟ್ಟು ಕನ್ನಡ ಕಲಾರಂಗಕ್ಕೆ ಆತನ ಸೇವೆ ಇದೆ ರೀತಿ ಮುಂದುವರಿಯಲಿ ಎಂದು ನನ್ನ ಶುಭಹಾರೈಕೆ..
ಕಾಂತಾರ ಸಿನಿಮ ಅಲ್ಲಾ ರೋಮಾಂಚನ ಅನುಭವ…god bless entire team
ಶುಭರಾತ್ರಿ..
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ಪೇಜ್ ಲೈಕ್ ಮತ್ತು ಶೇರ್ ಮಾಡೋದನ್ನ ಮರೆಯಬೇಡಿ.
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- Gold Rate : ಇಂದಿನ ಗೋಲ್ಡ್ ರೇಟ್ ಇಳಿಕೆ ಕಂಡಿದೆಯಾ.? ಎಷ್ಟಾಗಿದೆ ನೋಡಿ ಇವತ್ತಿನ ಚಿನ್ನದ ಬೆಲೆ.?
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!
- Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | ಆರೋಗ್ಯ ಸಲಹೆ