ನಮಸ್ಕಾರ ಸ್ನೇಹಿತರೇ, ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣವನ್ನು ಎಲ್ಲಾ ಅರ್ಹ ಮಹಿಳೆಯರ ಬ್ಯಾಂಕ್ ಅಥವಾ ಅಂಚೆ ಕಚೇರಿ ಖಾತೆಗೆ ದಸರಾ ಹಬ್ಬದ ಸಂದರ್ಭದಲ್ಲಿ ಡಿಬಿಟಿ ಮೂಲಕ ನೇರವಾಗಿ ಜಮಾ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷೀ ಹೆಬ್ಬಾಳ್ಕರ್ ಅವರು ಮಾಹಿತಿ ನೀಡಿದ್ದಾರೆ.
Kisan Credit Card : ಇನ್ನು ಮುಂದೆ ಕುರಿ, ಕೋಳಿ, ಹಸು, ಎಮ್ಮೆ ಸಾಕಾಣಿಕೆಗೆ ಸಾಲ ಸಿಗಲಿದೆ / ಸಬ್ಸಿಡಿ ಘೋಷಣೆ.!
ಇನ್ನು ಕೂಡ ಹಲವು ಅರ್ಹ ಫಲಾನುಭವಿ ಮಹಿಳೆಯರ ಖಾತೆಗೆ ಮೊದಲನೇ ಕಂತಿನ ಹಣ ಜಮಾ ಆಗಿಲ್ಲ. ಮೊದಲನೇ ಕಂತಿನ ಹಣವು ಕೆಲವು ತಾಂತ್ರಿಕ ಸಮಸ್ಯೆಗಳಿಂದಾಗಿ ಜಮಾ ಆಗದಿರುವುದರಿಂದ, ಎರಡನೇ ಕಂತಿನ ಹಣವನ್ನ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಇದುವರೆಗೂ ಗೃಹಲಕ್ಷ್ಮಿ ಯೋಜನೆಯ ಮೊದಲ ಕಂತಿನ ಹಣ ಜಮಾ ಆಗದಿರುವವರಿಗೆ, ಒಟ್ಟಾಗಿ 4,000/- ರೂಪಾಯಿ ಹಣ ಫಲನುಭವಿಗಳ ಖಾತೆಗೆ ಜಮಾ ಆಗುವ ಸಾಧ್ಯತೆಯಿದೆ. ಮೊದಲನೆಯದಾಗಿ ರಾಜ್ಯದ 31 ಜಿಲ್ಲೆಗಳಲ್ಲಿ ಪ್ರತಿಯೊಂದು ಜಿಲ್ಲೆಗಳಲ್ಲಿ ಸಂಪೂರ್ಣವಾಗಿ ಮೊದಲ ಕಂತಿನ ಹಣ ಜಮಾ ಮಾಡಲು ಪ್ರಯತ್ನಿಸಲಾಗುತ್ತಿದೆ.
ಒಂದು ವೇಳೆ ಮೊದಲ ಕಂತಿನ ಹಣ ಜಮಾ ಮಾಡಲು ಸಾಧ್ಯವಾಗದಿದ್ದಲ್ಲಿ, ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣದ ಜೊತೆಯಲ್ಲಿ ಒಟ್ಟಾಗಿ 4,000/- ರೂಪಾಯಿ ಹಣವನ್ನ ಅರ್ಹ ಫಲಾನುಭವಿಗಳ ಖಾತೆಗೆ ಜಮಾ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ರಾಜ್ಯದಲ್ಲಿ ಸುಮಾರು ಒಂದು ಕೋಟಿಗಿಂತ ಅಧಿಕ ಮಹಿಳಾ ಫಲಾನುಭವಿಗಳು ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿಯಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಗೆ ಅರ್ಜಿಗಳನ್ನ ಇದುವರೆಗೂ ಸಲ್ಲಿಸಿದ್ದಾರೆ. ಅದರಲ್ಲಿ ಕೆಲವೊಂದಿಷ್ಟು ಮಹಿಳೆಯರಿಗೆ ಇದುವರೆಗೂ ತಾಂತ್ರಿಕ ಸಮಸ್ಯೆಯಿಂದಾಗಿ ಹಣ ಖಾತೆಗೆ ಜಮಾ ಆಗಿಲ್ಲ.
ಪ್ರತಿ ಅರ್ಹ ಫಲಾನುಭವಿ ಮಹಿಳೆಯರು ಕೂಡ ಈ ಯೋಜನೆಯ ಪ್ರಯೋಜನವನ್ನ ಪಡೆಯಲು ಸಾಧ್ಯವಾಗುತ್ತದೆ. ಎಲ್ಲಾ ಜಿಲ್ಲೆಗಳಿಗೂ ಕೂಡ ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣವನ್ನು ಜಮಾ ಮಾಡಲು ಸರ್ಕಾರ ತೀರ್ಮಾನಿಸಿದೆ. ಹಾಗೂ ಪ್ರತೀ ಎಲ್ಲಾ ಅರ್ಹ ಫಲಾನುಭವಿ ಮಹಿಳೆಯರಿಗೆ ಕೂಡ ಖಂಡಿತವಾಗಿಯೂ ಹಣ ಜಮಾ ಆಗುತ್ತದೆ.