ಪ್ರಧಾನಿ ಮೋದಿ ಔತಣ ಕೂಟದಲ್ಲಿ ಪ್ರಶಾಂತ್ ನೀಲ್ ಗೈರಾಗಿದ್ದೇಕೆ ? ಇಲ್ಲಿದೆ ಅಸಲಿ ಕಾರಣ

ಕರ್ನಾಟಕಕ್ಕೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿನ ರಾಜಭವನದಲ್ಲಿ ತಂಗಿದ್ದ ವೇಳೆ ಕನ್ನಡ ಚಿತ್ರರಂಗದ ಗಣ್ಯರಿಗಾಗಿ ಔತಣಕೂಟ ಏರ್ಪಡಿಸಿದ್ದರು. ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಇದನ್ನು ಕೂಡ ಓದಿ : ವಯಸ್ಸಾಗದಂತೆ ಕಾಣಲು ಬಿಸಿ ನೀರಿಗೆ ಇದನ್ನು ಮಿಶ್ರಣ ಮಾಡಿ ಸ್ನಾನ ಮಾಡಿ

ಪ್ರಶಾಂತ್ ನೀಲ್ ಅವರನ್ನು ಹೊರತುಪಡಿಸಿ ಬಹುತೇಕ ಎಲ್ಲರೂ ಕೂಡ ನರೇಂದ್ರ ಮೋದಿಯವರ ಔತಣಕೂಟದಲ್ಲಿ ಪಾಲ್ಗೊಂಡಿದ್ದರು. ನಟ ರಾಕಿಂಗ್ ಸ್ಟಾರ್ ಯಶ್, ನಟ – ನಿರ್ದೇಶಕ ರಿಷಬ್ ಶೆಟ್ಟಿ, ನಿರ್ಮಾಪಕರಾದ ಅಶ್ವಿನಿ ಪುನೀತ್ ರಾಜಕುಮಾರ್, ಹೊಂಬಾಳೆಯ ವಿಜಯ್ ಕಿರಂಗದೂರು, ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಮಾಜಿ ರೇಡಿಯೋ ಜಾಕಿ ಶ್ರದ್ಧಾ ಜೈನ್ ಅವರುಗಳನ್ನು ಈ ಔತಣಕೂಟಕ್ಕೆ ಬಂದಿದ್ದರು.

ಪ್ರಶಾಂತ್ ನೀಲ್ ಅವರ ಗೈರು ಹಾಜರಿ  ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ. ಪ್ರಶಾಂತ್‌ ನೀಲ್‌ ರಾಜಕಾರಣದಿಂದ ದೂರ ಉಳಿಯುವ ಉದ್ದೇಶದಿಂದ ಅವರು ಈ ಔತಣ ಕೂಟದಲ್ಲಿ ಭಾಗವಹಿಸಿಲ್ಲ ಎಂಬ ಮಾತುಗಳು ಕೇಳಿಬಂದಿವೆ.ಆದರೆ ಪ್ರಶಾಂತ್ ನೀಲ್ ಅವರ ಆಪ್ತ ಮೂಲಗಳು ಇದೀಗ ಇದರ ಹಿಂದಿನ ಕಾರಣವನ್ನು ಬಿಚ್ಚಿಟ್ಟಿದ್ದಾರೆ. 

ಇದನ್ನೂ ಕೂಡ ಓದಿ : ನಾನು ‘ಯಶ್’ ತಂಗಿ ಎಂದು ದೀಪಿಕಾ ದಾಸ್ ಎಲ್ಲಿಯೂ ಹೇಳಲ್ಲಾ ಯಾಕೆ ಗೊತ್ತಾ.?

ಪ್ರಶಾಂತ್‌ ನೀಲ್‌, ಸದ್ಯಕ್ಕೆ ‘ಸಲಾರ್‌’ ಚಿತ್ರೀಕರಣಕ್ಕಾಗಿ ಹೈದಾರಾಬಾದ್‌ನಲ್ಲಿ ನೆಲೆಸಿದ್ದಾರೆ. ಹೈದರಾಬಾದಿನಲ್ಲಿದ್ದ ಪ್ರಶಾಂತ್ ನೀಲ್ ಜ್ವರದಿಂದ ಬಳಲುತ್ತಿದ್ದರಿಂದ ಬೆಂಗಳೂರಿನ ಔತಣಕೂಟಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್'ಸೇರಿಕೊಳ್ಳಿ

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply